close logo

ರಥಸಪ್ತಮಿ : ಆತ್ಮೋತ್ಥಾನದ ರಥಕ್ಕೆ ಆದಿತ್ಯನ ಕೃಪೆಯನ್ನರಸುವ ಸುದಿನ

ಹಿಂದೂಗಳ ಪ್ರತೀ ಹಬ್ಬವೂ ಕೂಡ ಒಂದಿಲ್ಲೊಂದು ಮಹತ್ತರ ಬಾಂಧವ್ಯವನ್ನು ಪ್ರಕೃತಿಯೊಂದಿಗೆ ಬೆಸೆಯುವಂತೆ ಮಾಡಲು ನಮಗೆಲ್ಲ ಪ್ರೇರಣೆ ನೀಡುತ್ತದೆ. ನಿಟ್ಟಿನಲ್ಲಿ ಭಾರತೀಯ ಸಂಸ್ಕೃತಿಯ ಪರಿಪಾಲಕರೆಲ್ಲ ಪ್ರಕೃತಿ ಆರಾಧಕರೇ. ನಿಸರ್ಗದಲ್ಲಿ ಬರುವ ಚರಾಚರ ಜೀವಿಗಳೆಲ್ಲವೂ ನಮಗೆ ವಂದ್ಯಯೋಗ್ಯವೆ. ಯುಗಾದಿ ಪಾಡ್ಯ, ಬಿದಿಗೆಭಾನು ಬಿದಿಗೆ, ತದಿಗೆಅಕ್ಷ ತದಿಗೆ, ಚೌತಿವಿನಾಯಕನ ಚೌತಿ ಸೇರಿದಂತೆಯೇ  ‘ಸಪ್ತಮಿ ಸರದಿ ಬಂದಾಗ ರಥಸಪ್ತಮಿ ಸೇರಿಸಿಕೊಂಡು ಗಮನಿಸಿದಾಗ, ಆಯಾ ವಿಶೇಷ ದಿನಗಳ ಆಚರಣೆಯ ಸಂದರ್ಭದಲ್ಲಿ ಅವುಗಳ ಮಹತ್ವವನ್ನು ಮನೆಯ ಹಿರಿಯರಾದಿಯಾಗಿ, ಅಜ್ಜಅಜ್ಜಿಯರು ತಿಳಿಸಿಕೊಡುತ್ತಿದ್ದರು. ಸಮಯ ಸಿಕ್ಕಾಗಲೆಲ್ಲ ಹಬ್ಬಗಳ ಮಹತ್ವದ ಬಗ್ಗೆ ಕಥೆಗಳ ಮತ್ತು ಸ್ವತಃ ತಾವೇ ಆಚರಿಸಿದ ಪ್ರಕ್ರಿಯೆಗಳ ಅನುಭವದ ಮುಖೇನ ವಿವರಿಸುತ್ತಿದ್ದರು. ಹಬ್ಬಗಳು ಪ್ರತಿವರ್ಷ ಬರುತ್ತವೆ, ಹೋಗುತ್ತವೆ. ಆದರೆ ಅವುಗಳ ಆಚರಣೆಯ ಹಿಂದಿನ ಗೂಢಾರ್ಥ, ವೈಜ್ಞಾನಿಕ ಅಂಶಗಳನ್ನು ಅರಿತಾಗ ಮಾತ್ರವೇ ಅರ್ಥಪೂರ್ಣ ಆಚರಣೆಯಾಗುತ್ತದೆ. ಯುಗಾದಿ ಹಬ್ಬ ನಾವೀನ್ಯತೆಯನ್ನು ಹೊತ್ತು ತಂದರೆ, ಅದಕ್ಕೂ ಮುನ್ನ ಬರುವ ರಥಸಪ್ತಮಿ ಹಳತರ ಜಾಗದಲ್ಲಿ ಹೊಸತನ್ನು ತಂದಿಟ್ಟು ಬದುಕನ್ನು ಆನಂದಮಯವಾಗಿಸಿಕೊಳ್ಳಲು ಪ್ರೇರೇಪಿಸುತ್ತದೆ. “ಮಾಘ ಮಾಸದ ಶುಕ್ಲ ಪಕ್ಷದ ಸಪ್ತಮಿ ತಿಥಿಯಂದು ದಿನ ಸೂರ್ಯ ಹಳೆಯ ರಥವನ್ನು ಬಿಟ್ಟು ಹೊಸ ರಥ ಹತ್ತುತ್ತಾನಂತೆಎಂದು ಮನೆಯ ಹಿರಿಯರು ಹೇಳುತ್ತಿದ್ದುದು ನೆನಪಾಗುತ್ತದೆ.

ಯಾವುದೇ ವಸ್ತು ಹಳೆಯದಾದ ಮಾತ್ರಕ್ಕೆ ಬದುಕು ಹಳತಾಗದು. ಅದು ನಿತ್ಯ ನವೀನ. ಹೀಗಾಗಿಯೇ ದೇಹ ಹಳತಾದಂತೆ ಹಳೆಯ ಬಟ್ಟಿ ಕಳಚಿ ಹೊಸದನ್ನು ಧರಿಸಿದಂತೆ ಅದನ್ನು ವಿಸರ್ಜಿಸಿ ಆತ್ಮ ಹೊಸತನ್ನು ಪಡೆಯುತ್ತದೆ ಎಂಬ ನಂಬಿಕೆಯಿದೆ. ಸೂರ್ಯನೂ ಹಾಗೆಯೇ, ಪ್ರತಿವರ್ಷ ರಥ ಬದಲಿಸಿ ತನ್ನ ಕಾರ್ಯವನ್ನು ಚುರುಕುಗೊಳಿಸುತ್ತಾನೆ. ತನ್ಮೂಲಕ ಭುವಿಯ ನಿವಾಸಿಗಳಿಗೆ ಚೈತನ್ಯ ನೀಡುತ್ತಾನೆ. ಹಿನ್ನೆಲೆಯಲ್ಲಿ ಆತನನ್ನು ಗೌರವಿಸುವ ಸಲುವಾಗಿ ಬಾರಿ ಫೆಬ್ರವರಿ 16  ಶುಕ್ರವಾರ ಮಾಘ ಮಾಸ, ಶುಕ್ಲಪಕ್ಷದ ಸಪ್ತಮಿ ತಿಥಿಯಂದು ದೇಶಾದ್ಯಂತ ರಥಸಪ್ತಮಿ ಆಚರಿಸಲಾಗುತ್ತಿದೆ. ಆರೋಗ್ಯಂ ಭಾಸ್ಕರಾದಿಚ್ಛೇತ್. ಚಳಿಗಾಲದಲ್ಲಿ ಮುದುಡುವ ಶರೀರ, ರಥಸಪ್ತಮಿಯ ಬಳಿಕ ಸೂರ್ಯನ ಶಾಖದಿಂದಾಗಿ ನವಚೈತನ್ಯದಿಂದ ತುಂಬಿಕೊಳ್ಳುತ್ತದೆ. ‘ಆರೋಗ್ಯಂ ಭಾಸ್ಕರಾದಿಚ್ಛೇತ್ಅಂದರೆ ಸೂರ್ಯ ಆರೋಗ್ಯದಾಯಿ. ವೈಜ್ಞಾನಿಕವಾಗಿಯೂ ಇದು ಸಾಬೀತಾಗಿದೆ. ಹಸುಗೂಸಿನ ಕಣ್ಣುಗಳು ಸಾಮಾನ್ಯವಾಗಿ ಹಳದಿ ಬಣ್ಣಕ್ಕೆ ತಿರುಗಿದ ಸಂದರ್ಭದಲ್ಲಿ ಪ್ರತಿದಿನ ಎಳೆಬಿಸಿಲಿಗೆ ಮಗುವನ್ನು ಮಲಗಿಸುವಂತೆ ವೈದ್ಯರು ಸಲಹೆ ನೀಡುತ್ತಾರೆ. ಚಂದ್ರನ ಬೆಳಕಿನಲ್ಲಿ ವಿಟಮಿನ್ಬಿ 12’ ಇದ್ದರೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ಡಿಹೇರಳವಾಗಿದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಹೀಗಾಗಿಯೇ ಪ್ರತ್ಯಕ್ಷವಾಗಿ ಕಾಣುವ ದೈವಸ್ವರೂಪಿ ಸೂರ್ಯನ ಆರಾಧನೆಗೆ ವಿಗ್ರಹಾರಾಧನೆ ಬಳಕೆಗೆ ಬರುವ ಮುಂಚಿನಿಂದಲೂ ಪ್ರಾಶಸ್ತ್ಯವಿದೆ. ಆಹಾರಕ್ಕಾಗಿ, ರೋಗ ನಿವಾರಣೆಗಾಗಿ ಸೂರ್ಯೋಪಾಸನೆ ಮಾಡಬೇಕೆಂದು ಸ್ಕಂದ, ವರಾಹ ಪುರಾಣಗಳಲ್ಲಿಯೂ ಹೇಳಲಾಗಿದೆ.

ರೋಗ ನಿವಾರಣೆ, ದೇಹದಾರ್ಢ್ಯ ಹಾಗೂ ಆರೋಗ್ಯವನ್ನು ಬಯಸುವವರು ಸೂರ್ಯನ ಆರಾಧನೆ ಮಾಡಬೇಕೆಂಬ ನಿಯಮವಿದೆ. ರೋಗಾಣುಗಳನ್ನು ನಾಶ ಪಡಿಸುವ ಶಕ್ತಿ ಸೂರ್ಯನ ಕಿರಣಗಳಲ್ಲಿವೆ. ಬೆಳಗಿನ ಹಾಗೂ ಸಂಜೆಯ ಸೂರ್ಯ ಕಿರಣಗಳಿಂದ ಆರೋಗ್ಯ ವರ್ಧನೆಯಾಗುತ್ತದೆ. ರೋಗದಿಂದ ನರಳುವವರು ರಥಸಪ್ತಮಿಯ ದಿನದಿಂದಲಾದರೂ ಸೂರ್ಯಾರಾಧನೆಯನ್ನು ಮಾಡಿದರೆ ಅರ್ಥಾತ್ ಆತನ ಕಿರಣಗಳಿಗೆ ಸೂಕ್ತ ವೇಳೆಯಲ್ಲಿ ಮೈಯೊಡ್ಡಿದರೆ ಬೇಗ ಗುಣಹೊಂದುತ್ತಾರೆ ಎಂಬುದು ವೈಜ್ಞಾನಿಕವಾಗಿ ಸಾಬೀತಾಗಿದೆ. ಸೂರ್ಯರಾಧನೆಯನ್ನು ಮುಖ್ಯವಾಗಿ ಭಾರತ, ಮಧ್ಯ ಆಫ್ರಿಕಾ, ಈಜಿಪ್ಟ್‌, ಗ್ರೀಸ್ ಹಾಗೂ ಮಧ್ಯ ಏಷ್ಯಾಗಳಲ್ಲಿ ಆಚರಿಸಲಾಗುತ್ತಿದೆ. ಸೂಕ್ಷ್ಮವಾಗಿ ಗಮನಿಸಿದರೆ ಯೋಗಾಸನಗಳಲ್ಲಿ ಕೂಡ ಮೊದಲ ಪ್ರಾಶಸ್ತ್ಯ ಸೂರ್ಯನಮಸ್ಕಾರಕ್ಕಿದೆ. ಏಕೆಂದರೆ ಅಭ್ಯಾಸವು ಮನಸ್ಸು, ದೇಹ ಮತ್ತು ಉಸಿರಾಟ ವ್ಯವಸ್ಥೆಗಳಿಗೆ ವಿಶೇಷವಾಗಿ ಪರಿಣಾಮಕಾರಿಯಾಗಿದೆ. ಭೂಮಿಯಲ್ಲಿನ ಸಕಲ ಜೀವರಾಶಿಗಳ ಚಟುವಟಿಕೆಗಳ ಸೂರ್ಯನಿಂದ ನಡೆಯುತ್ತಿದೆ. ಸೂರ್ಯನಿಲ್ಲದೆ ಜೀವನದ ಅಸ್ತಿತ್ವ ಇರಲು ಸಾಧ್ಯವಿಲ್ಲ. ಹೀಗಾಗಿ ರಥಸಪ್ತಮಿಯಂದು 108 ಸೂರ್ಯ ನಮಸ್ಕಾರಗಳು ಹಾಗೂ ಸಪ್ತಾಶ್ವಗಳ ಪ್ರತೀಕವಾಗಿ ಸಪ್ತ ನಮಸ್ಕಾರಗಳನ್ನು ಮಾಡುವ ಅಭ್ಯಾಸವಿದೆ

ರಥಸಪ್ತಮಿಯ ಹಿನ್ನೆಲೆ

ದ್ವಾಪರ ಯುಗದಲ್ಲಿ ಶ್ರೀ ಕೃಷ್ಣನು ಧರ್ಮರಾಜನಿಗೆ ರಥಸಪ್ತಮಿ ಬಗ್ಗೆ ಹೇಳಿದ ಕಥೆಯಿದೆ. ಯಶೋವರ್ಮನೆಂಬ ರಾಜನಿಗೆ ಹುಟ್ಟಿದ ಮಗನು ಹುಟ್ಟಿನಿಂದಲೇ ರೋಗಿಷ್ಠನಾಗಿದ್ದ. ಬಗ್ಗೆ ಜ್ಯೋತಿಷಿಗಳಿಂದ ಮಾಹಿತಿ ಪಡೆದು ಸಂಚಿತಕರ್ಮದಿಂದ ಬಂದಿರುವ ಕಾಯಿಲೆಗೆ ರಥಸಪ್ತಮಿ ವ್ರತ ಆಚರಿಸಲು ಹೇಳಿದ್ದರು. ಅದರಂತೆ ಅಂದು ಸೂರ್ಯಾರಾಧನೆ ಮಾಡಲಾಗಿ ರಾಜ ಪುತ್ರನು ಆರೋಗ್ಯವಂತನೂ, ಪ್ರಭಾವಶಾಲಿಯೂ ಆದನು. ಅಲ್ಲದೇ ಪಾಂಡವರು ವನವಾಸದ ಅವಧಿಯಲ್ಲಿ ಶ್ರೀಕೃಷ್ಣನ ಆದೇಶದಂತೆ ಸೂರ್ಯಾರಾಧನೆ ಮಾಡಿ ಆತನಿಂದ ಅಕ್ಷಯ ಪಾತ್ರೆ ಪಡೆದಿದ್ದರು. ಅಲ್ಲದೇ ರಾವಣನನ್ನು ಗೆಲ್ಲಬೇಕಾದರೆ ಶ್ರೀರಾಮನೂ ಕೂಡ ಅಗಸ್ತ್ಯರ ಉಪದೇಶದಂತೆ ಆದಿತ್ಯಹೃದಯ ಸ್ತೋತ್ರದ ಮೂಲಕ ಸೂರ್ಯನ ಆರಾಧನೆ ಮಾಡಿದನೆಂದು ರಾಮಾಯಣದಲ್ಲಿ ಹೇಳಿದೆ. ಸೂರ್ಯಾರಾಧನೆ ಮಾಡಿ, ಚಿನ್ನ ನೀಡುವ ಶಮಂತಕಮಣಿ ಪಡೆದ ಸತ್ರಾಜಿತನ ಕಥೆ ಹರಿವಂಶದಲ್ಲಿ ಬಂದಿದೆ. ಮಯೂರನೆಂಬ ಕವಿ ಸೂರ್ಯಶತಕವೆಂಬ ಗ್ರಂಥ ಬರೆದು ಕಳೆದುಕೊಂಡ ಕಣ್ಣನ್ನು ಮತ್ತೆ ಪಡೆದನೆಂದು ಹೇಳುತ್ತಾರೆ. ಪ್ರಭು ಶ್ರೀರಾಮಚಂದ್ರ ಸೂರ್ಯವಂಶದವನಾದರೆ ಕರ್ಣ, ಸುಗ್ರೀವ, ಶನೈಶ್ಚರ ಹಾಗೂ ಯಮ ಸೂರ್ಯನ ಪುತ್ರರಾಗಿದ್ದಾರೆ. ರಥಸಪ್ತಮಿಯಂದು ಸೂರ್ಯೋದಯಕ್ಕೆ ಸರಿಯಾಗಿ ನದಿ, ಸಮುದ್ರ, ಸರೋವರ, ಸಂಗಮ ಮುಂತಾದೆಡೆ ಸ್ನಾನ ಮಾಡಿ ಸೂರ್ಯನಿಗೆ ಅರ್ಘ್ಯ ನೀಡಿದರೆ ಪೂರ್ವ ಜನ್ಮದ ಪಾಪಗಳು ಹಾಗೂ ಜನ್ಮದ ಸಕಲ ದುಃಖಗಳು ಪರಿಹಾರವಾಗುತ್ತವೆ. ಸೂರ್ಯೋದಯಕ್ಕೆ ಮಾಡುವ ಮಾಘಸ್ನಾನ ತುಂಬಾ ಪುಣ್ಯಪ್ರದವಾದುದು. ಆಯುಷ್ಯ, ಆರೋಗ್ಯಸಂಪತ್ತು ಲಭಿಸುವುದಲ್ಲದೇ, ಸೂರ್ಯನ ಅನುಗ್ರಹ ಪ್ರಾಪ್ತಿಯಾಗುತ್ತದೆಂದು ಪುರಾಣಗಳು ಕೂಡ ಸಾರಿ ಸಾರಿ ಹೇಳುತ್ತಿವೆ.  

ಎಕ್ಕದೆಲೆಯ ಸ್ನಾನ ಸಂದರ್ಭದಲ್ಲಿ ಪ್ರಮುಖವೆನ್ನಿಸಿಕೊಳ್ಳುತ್ತದೆ. ಸೂರ್ಯನ ಕಿರಣಗಳಲ್ಲಿನ ಸತ್ವಗಳನ್ನು ಹೀರಿಕೊಂಡಿರುವ ಏಳು ಅರ್ಕದೆಲೆ ಅಥವಾ ಎಕ್ಕದೆಲೆಗಳನ್ನು ತಲೆ, ಭುಜಗಳು, ಮೊಣಕಾಲು, ಪಾದಗಳ ಮೇಲಿರಿಸಿ ಸ್ನಾನ ಮಾಡುವುದು ರಥಸಪ್ತಮಿಯ ವಿಶೇಷತೆಗಳಲ್ಲೊಂದು. ಎಕ್ಕದ ಎಲೆಗಳಿಗೆ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು, ರೋಗಗಳನ್ನು ನಿವಾರಿಸುವ ಸಾಮರ್ಥ್ಯವಿದೆ, ಅಷ್ಟೇ ಅಲ್ಲದೇ, ದೇಹದಲ್ಲಿನ ಕೀಲು ನೋವು, ಹಲ್ಲು ನೋವು, ಹೊಟ್ಟೆ ನೋವುಗಳಿಗೂ ಸಹ ಎಕ್ಕದ ಗಿಡ ಮತ್ತು  ಅದರ ಎಲೆಗಳಲ್ಲಿರುವ ಔಷಧೀಯ ಅಂಶಗಳಿಂದ ಪರಿಹಾರ ಕಂಡುಕೊಳ್ಳಬಹುದಾಗಿದೆ. ಹೀಗಾಗಿಯೇ ದಿನ ಎಕ್ಕದೆಲೆಯ ಸ್ನಾನಕ್ಕೆ ಮಹತ್ವ ನೀಡಲಾಗಿದೆ. ‌ರಥಸಪ್ತಮಿ ದಿನದಂದು ಸೂರ್ಯೋದಯಕ್ಕೆ ಸರಿಯಾಗಿ ನದಿ, ಸಮುದ್ರ, ಸರೋವರ, ಸಂಗಮ ಮುಂತಾದೆಡೆ ಸ್ನಾನ ಮಾಡಿ ಸೂರ್ಯನಿಗೆಅರ್ಘ್ಯನೀಡಿದರೆ ಪೂರ್ವ ಜನ್ಮದ ಪಾಪಗಳು ಹಾಗೂ ಜನ್ಮದ ಸಕಲ ದುಃಖಗಳು ಕೂಡ ಪರಿಹಾರವಾಗುತ್ತವೆ. ಸೂರ್ಯೋದಯಕ್ಕೆ ಮಾಡುವ ಮಾಘಸ್ನಾನ ಪುಣ್ಯಪ್ರದವಾದುದು. ಆಯುಷ್ಯ, ಆರೋಗ್ಯ ಸಂಪತ್ತು ಲಭಿಸುವುದಲ್ಲದೆ, ಸೂರ್ಯನ ಅನುಗ್ರಹ ಪ್ರಾಪ್ತಿಯಾಗುತ್ತದೆಂಬ ನಂಬಿಕೆ ಜನಮಾನಸದಲ್ಲಿದೆ

ರಥಸಪ್ತಮಿಯು ಯಾವಾಗಲೂ ಅರುಣೋದಯ ವ್ಯಾಪಿನಿಯಾಗಿರುವುದರಿಂದ ಸರಿಯಾಗಿ ಸೂರ್ಯೋದಯಕ್ಕೆ ಆಚರಣೆ ಮಾಡಬೇಕು. ರಥ ಸಪ್ತಮಿಯಂದು ಸೂರ್ಯೋದಯ ಕಾಲಕ್ಕೆ ಸ್ನಾನ ಮಾಡಬೇಕು. ಸ್ನಾನಕಾಲಕ್ಕೆ ಪಠಿಸಬೇಕಾದ ಮಂತ್ರಗಳು – 

ಯದ್ಯಜ್ಜನ್ಮಕೃತಂ ಪಾಪಂ ಮಯಾ ಸಪ್ತಸು ಜನ್ಮಸು । 
ತನ್ಮೇ ರೋಗಂ ಶೋಕಂ ಮಾಕರೀ ಹಂತು ಸಪ್ತಮೀ1॥ 

ಏತಜ್ಜನ್ಮಕೃತಂ ಪಾಪಂ ಯಚ್ಚ ಜನ್ಮಾಂತರಾರ್ಜಿತಮ್ ।  
ಮನೋವಾಕ್ಕಾಯಜಂ ಯಚ್ಚ ಜ್ಞಾತಾಜ್ಞಾತೇ ಯೇ ಪುನಃ2॥ 

ಇತಿ ಸಪ್ತವಿಧಂ ಪಾಪಂ ಸ್ನಾನಾನ್ಮೇ ಸಪ್ತಸಪ್ತಿಕೇ ।  
ಸಪ್ತವ್ಯಾಧಿಸಮಾಯುಕ್ತಂ ಹರ ಮಾಕರಿ ಸಪ್ತಮೀ3

ಹೀಗೆ ಯಾರು ಮೂರು ಮಂತ್ರೋಚ್ಚಾರಣ ಪೂರಕ ಸ್ನಾನ ಮಾಡಿ ಸೂರ್ಯ ಮತ್ತು ಕೇಶವನ ದರ್ಶನವನ್ನು ಮಾಡುತ್ತಾರೋ, ಅವರು ಕ್ಷಣಮಾತ್ರದಲ್ಲಿ ಪಾಪಗಳಿಂದ ಮುಕ್ತರಾಗುವರು. (ನಿರ್ಣಯಸಿಂಧು)

ಸ್ನಾನಾನಂತರ ಸೂರ್ಯ ಮತ್ತು ಸಪ್ತಮಿತಿಥಿಗೆ ಅರ್ಘ್ಯಒಂದು ತಾಮ್ರದ ಕಲಶದಲ್ಲಿ (ತಂಬಿಗೆ) ಶುದ್ಧವಾದ ಜಲ, ಅಕ್ಷತೆ, ಚಂದನ, ಬಿಳಿಬಣ್ಣದ ಹೂವುಗಳು, ಗರಿಕೆ, ಎಕ್ಕೆಯ ಎಲೆಗಳನ್ನು ತುಂಬಿಸಿ, ಮುಂದಿನ ಮಂತ್ರಗಳಿಂದ ಸೂರ್ಯ ಮತ್ತು ಸೂರ್ಯಜನನಿಯಾದ ಸಪ್ತಮೀ ತಿಥಿಗೂ ಸಹ ಅರ್ಘ್ಯವನ್ನು ಕೊಡಬೇಕು.

ಸೂರ್ಯಾರ್ಘ್ಯ ಮಂತ್ರ – 

ಸಪ್ತಸಪ್ತಿವಹ ಪ್ರೀತ ಸಪ್ತಲೋಕಪ್ರದೀಪನ। 
ಸಪ್ತಮೀ ಸಹಿತೋ ದೇವ ಗೃಹಾಣಾರ್ಘ್ಯಂ ದಿವಾಕರ

ಎಂದು ಸೂರ್ಯನಿಗೆ ಅರ್ಘ್ಯವನ್ನು ಕೊಡಬೇಕು. ಸಪ್ತಮೀ ಅರ್ಘ್ಯಮಂತ್ರ – 

ಜನನೀ ಸರ್ವಲೋಕಾನಾಂ ಸಪ್ತಮೀ ಸಪ್ತಸಪ್ತಿಕೇ। 
ಸಪ್ತವ್ಯಾಹೃತಿಕೇ ದೇವಿ ನಮಸ್ತೇ ಸೂರ್ಯಮಂಡಲೇ ॥ 

ಎಂದು ಸಪ್ತಮೀ ತಿಥಿಯ ಕುರಿತು ಅರ್ಘ್ಯ ಕೊಡಬೇಕು.

ರಥಸಪ್ತಮಿಯ ಪರ್ವ ಎಲ್ಲಾ ರಾಶಿಯವರಿಗೂ ವಿಶೇಷ ಫಲಪ್ರದ. ಸೂರ್ಯನು ಯಾವುದೇ ಜಾತಕದಲ್ಲಿ ಇದ್ದರೂ ಆತ್ಮರೂಪಿಯಾಗಿ ಇರುತ್ತಾನಂತೆ. ಆದ್ದರಿಂದ ಅವನ ಪ್ರೀತ್ಯರ್ಥ ಪೂಜಾಕಾರ್ಯ ಆರೋಗ್ಯ, ಸಂಪತ್ತು ಮತ್ತು ಆನಂದಪ್ರದ. ರಥಸಪ್ತಮಿಯಂದು  ಸೂರ್ಯನ ಆರಾಧಿಸುವ ಅವನ ಕಾಂತಿಯಿಂದ ನಮ್ಮ ಬಾಳಿನ ಕತ್ತಲು ಸರಿದು ಹೊಸ ಬೆಳಕು ಮೂಡಲಿ ಸರ್ವರಲಿ. ಹೀಗಾಗಿ ನಮ್ಮ ನಿಮ್ಮೆಲ್ಲರ ಆತ್ಮೋತ್ಥಾನದ ರಥಕ್ಕೆ ಆದಿತ್ಯನ ಕೃಪೆಯನ್ನರಸುವ ಸುದಿನವನ್ನು ಕೃತಾರ್ಥಗೊಳಿಸಿಕೊಳ್ಳೋಣ

Feature Image Credit: istockphoto.com

Disclaimer: The opinions expressed in this article belong to the author. Indic Today is neither responsible nor liable for the accuracy, completeness, suitability, or validity of any information in the article.